ರಾಜ್ಯದಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Update: 2023-10-14 14:33 GMT

ದಾವಣಗೆರೆ : ʼರಾಜ್ಯದಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆʼ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ಮುಖ್ಯ ಅಂತ ಕೆಲ ಮುಖಂಡರು ಹೇಳುತ್ತಾರೆ. ಹೀಗೆ ಹೇಳುವ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಬಹುತೇಕ ಜನರನ್ನು ಸೇರಿಸಿಕೊಂಡು ತಮ್ಮದೇ ಗುಂಪು ಮಾಡಿಕೊಡಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಗೆಲ್ಲದವರು ಗುಂಪು ಕಟ್ಟಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಮಹಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದರು. ಪಕ್ಷ ಸಹ ಮುಗಿಸಿದರು. ಬಿಜೆಪಿಗೆ ನಾಯಕತ್ವ ಇಲ್ಲಾ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬೇರೆ ಪಕ್ಷದ ಕಡೆ ಮುಖ ಮಾಡಿದ್ದಾರೆ. ವ್ಯಕ್ತಿ ಮುಖ್ಯ ಅಲ್ಲ ಅಂತಾರೇ ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿಯಲ್ವಾ. ಹೇಗೆ ಮೋದಿ ರಾಷ್ಟ್ರ ಮಟ್ಟದಲ್ಲಿ ಮುಖ್ಯವೋ. ಅದೇ ರೀತಿ ರಾಜ್ಯ ಮಟ್ಟದಲ್ಲಿ ಯಡಿಯೂರಪ್ಪ ಮುಖ್ಯ. ಬಿಜೆಪಿಯನ್ನು ಯಡಿಯೂರಪ್ಪ ಕೈಗೆ ಕೊಡಲಿ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ. ಒಂದು ಹೊಸ ತಂಡ ಬರುತ್ತದೆ. ಆದರೆ, ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವರು ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News