ಜೆಡಿಎಸ್ ಸರ್ಕಾರದ ಪತನಕ್ಕೆ ಬೇರೆಯವರ ಮೇಲಿನ ಆರೋಪ ನಿರರ್ಥಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-10-23 08:36 GMT

ಬೆಂಗಳೂರು, ಅಕ್ಟೋಬರ್ 23 : ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News