ಸರ್ವಪಕ್ಷ ಸಭೆಗೆ ಬಿಎಸ್​ವೈ, ಬೊಮ್ಮಾಯಿ, ಎಚ್ ಡಿಕೆ ಗೈರು: ಕಾರಣ ಕೊಟ್ಟ ನಾಯಕರು

Update: 2023-09-13 09:28 GMT

ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಅವರು ಗೈರಾಗಿದ್ದಾರೆ. 

''ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಿಮಿತ್ತ ಸರ್ವ ಪಕ್ಷ ಸಭೆಗೆ ಆಗಮಿಸುತ್ತಿಲ್ಲ'' ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ಚೀಟ್ ಮೂಲಕ ಸರ್ವಪಕ್ಷ ಸಭೆಗೆ ಆಗಮಿಸುತ್ತಿಲ್ಲʼʼ ಎಂದು ತಿಳಿಸಿದ್ದಾರೆ.

ʼʼರಾಜ್ಯ ಸರ್ಕಾರ ಕಾವೇರಿ ವಿವಾದ ಕುರಿತು ಚರ್ಚಿಸಲು ನಿನ್ನೆ ತಡರಾತ್ರಿ ಸಭೆಗೆ ಆಹ್ವಾನ ನೀಡಿದೆ. ಆದರೆ, ನಾನು ನನ್ನ ಕ್ಷೇತ್ರದ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದರಿಂದ ಸರ್ಕಾರ ಕರೆದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕಾವೇರಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ರಾಜ್ಯದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಮತ್ತು ಸಿಡಬ್ಲ್ಯೂಎಂಎಗೆ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡಬೇಕುʼʼ ಎಂದು ಬೊಮ್ಮಾಯಿ ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ಸಭೆಗೆ ಗೈರಾದವರು

ಮಾಜಿ ಸಿಎಂಗಳಾದ ಹೆಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿ ಎಸ್ ಯಡಿಯೂರಪ್ಪ, ಎಸ್ ಎಂ ಕೃಷ್ಣ, ಡಿ ವಿ ಸದಾನಂದಗೌಡ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಭೆಗೆ ಗೈರಾದ ನಾಯಕರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News