ಉಪ ಚುನಾವಣೆ | ರಾಜ್ಯದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

Update: 2024-10-23 17:44 GMT

ಸಿ.ಪಿ.ಯೋಗೇಶ್ವರ್

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.

ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿರುವ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಅವರು ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಕಾಂಗ್ರೆಸ್ ಶಾಸಕ ಈ.ತುಕಾರಾಮ್, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷವು ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿದ್ದು, ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಇನ್ನಷ್ಟೇ ಅಭ್ಯರ್ಥಿಯನ್ನು ಘೋಷಿಸಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News