ಸೆ.17ರಂದು ಕಲ್ಬುರ್ಗಿಯಲ್ಲಿ ಸಂಪುಟ ಸಭೆ

Update: 2024-09-06 16:24 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಲಬುರಗಿಯ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೆ.17ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಸರಕಾರದ ಜಂಟಿ ಕಾರ್ಯದರ್ಶಿ(ಸಚಿವ ಸಂಪುಟ) ಆರ್.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲ್ಬುರ್ಗಿಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಸರಕಾರದ ಸಚಿವಾಲಯ ತಿಳಿಸಿದೆ.

ಈ ಮೊದಲು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಬೆಂಗಳೂರಿನಲ್ಲೇ ಸಚಿವ ಸಂಪುಟ ಸಭೆಗಳನ್ನು ನಡೆಸಿದ್ದರು. ಈ ಹಿಂದೆ ದೇವರಾಜು ಅರಸು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಗಡೆ ಸಂಪುಟ ಸಭೆ ನಡೆಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕಲ್ಬುರ್ಗಿಯಲ್ಲಿ ಸಂಪುಟ ಸಭೆ ನಡೆದಿತ್ತು.

ಪ್ರಾದೇಶಿಕ ಅಸಮಾನತೆ ನಿವಾರಣೆ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಬೆಂಗಳೂರಿನಿಂದ ಬೇರೆಡೆಗೆ ವಿಕೇಂದ್ರಿಕರಣಗೊಳಿಸು ಕುರಿತು ಚರ್ಚೆಗಳು ನಡೆದಿವೆ. ಆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದ್ದು, ವರ್ಷಕ್ಕೊಮೆ ವಿಧಾನ ಮಂಡಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News