ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ: ಸತೀಶ್ ಜಾರಕಿಹೊಳಿ

Update: 2024-10-09 13:06 GMT

ಅರಸಿಕೆರೆ: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಆದಾದ ನಂತರ ಉತ್ತರ ನೀಡುವೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

ತಾಲೂಕಿನ ಎಪಿಎಂಸಿ ಮಾಜಿ ಅಧ್ಯಕ್ಷರಾದ ಬೈಲರ್ ಕುಮಾರಣ್ಣ ಬಾಣಾವರ ಮನೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂಬ ಕೂಗು ಕೇಳಿ ಬರುತ್ತಿದೆ ಎಂಬ ವರದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಖಾಲಿ ಆದ ನಂತರ ಉತ್ತರ ನೀಡುವೆ ಎಂದರು.

ರಾಜ್ಯದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ನಾವು ಏನು ಹೇಳಲಾಗುವುದಿಲ್ಲ ಎಂದು ಉತ್ತರಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News