ಚಾಮರಾಜನಗರ | ಸಾಲಬಾಧೆ: ದಂಪತಿ ಆತ್ಮಹತ್ಯೆ

Update: 2024-08-18 05:09 GMT

ಚಾಮರಾಜನಗರ, ಆ.18: ಸಾಲಬಾಧೆಯಿಂದ ಸಂಕಷ್ಟಕ್ಕೊಳಗಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಾರಾಯಣ ಸ್ವಾಮಿ ದೇವಸ್ದಾನದ ಬೀದಿಯಲ್ಲಿ ರವಿವಾರ ಮುಂಜಾನೆ ಬೆಳಕಿಗೆ ಬಂದಿದೆ.

ನಾರಾಯಣ ಸ್ವಾಮಿ ಗುಡಿ ಬೀದಿಯ ನಿವಾಸಿಗಳಾದ ನಾಗೇಶ್(56) ಹಾಗೂ ಅವರ ಪತ್ನಿ ಸತ್ಯಲಕ್ಷ್ಮೀ (45) ಆತ್ಮಹತ್ಯೆ ಮಾಡಿಕೊಂಡವರು.

ಇವರು ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಮಹಜರ್ ನಡೆಸಿ , ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News