ಚಾಮರಾಜನಗರ: ಸಿನಿಮೀಯ ರೀತಿಯಲ್ಲಿ ಕಾರು ಸಮೇತ ಚಿನ್ನದ ವ್ಯಾಪಾರಿಯ ಅಪಹರಣ

Update: 2023-08-12 12:08 GMT

ಚಾಮರಾಜನಗರ, ಆ.12: ಚಿನ್ನದ ವ್ಯಾಪಾರಿಯನ್ನು ಸಿನಿಮೀಯ ರೀತಿಯಲ್ಲಿ ಕಾರು ಸಮೇತ ಅಪಹರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ವರದಿಯಾಗಿದೆ.

ಶಿವು ಅಪಹರಣಕ್ಕೊಳಗಾದವರು ಎಂದು ತಿಳಿದು ಬಂದಿದೆ. ಮೈಸೂರು ಕಡೆಯಿಂದ ಕೇರಳಕ್ಕೆ ತೆರಳುವಾಗ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ವ್ಯಾಪಾರಿಯ ಕಾರು ಅಡ್ಡಗಟ್ಟಿ ಚಾಲಕನನ್ನು ಹೊರಗೆಳೆದು ವ್ಯಾಪಾರಿಯನ್ನು ಅಪಹರಿಸಿದ್ದಾರೆ.

ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ. ಪೊಲೀಸರ ದಿಕ್ಕು ತಪ್ಪಿಸಲು ಮೂರು ಕಾರುಗಳನ್ನು ಒಂದೊಂದು ದಿಕ್ಕಿಗೆ ಚಾಲನೆ ಮಾಡಿಕೊಂಡು ಹೋಗಿದ್ದು, ಒಂದು ಕಾರನ್ನು ಸೋಮಹಳ್ಳಿ ಬಳಿ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ, ಕೇರಳ ಮೂಲದ ಐವರನ್ನು ಪೊಲೀಸರು ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದ್ದು ವ್ಯಾಪಾರಿ ಹಾಗೂ ಉಳಿದ ಅಪಹರಣಕಾರರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಚಾಮರಾಜನಗರ, ಗುಂಡ್ಲುಪೇಟೆ, ಬೇಗೂರು, ತೆರಕಣಾಂಬಿ ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿ ಕಾರುಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್​ಪಿ, ಎಎಸ್​ಪಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News