ಚಾಮರಾಜನಗರ | ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ನಾಶಪಡಿಸಿದ ದುಷ್ಕರ್ಮಿಗಳು; 15 ಲಕ್ಷಕ್ಕೂ ಹೆಚ್ಚು ನಷ್ಟ

Update: 2023-08-03 15:10 GMT
ಚಿತ್ರ- ಪಿಟಿಐ

ಚಾಮರಾಜನಗರ : ಹಳೆಯ ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.

ರೈತ ಮಂಜು ಎಂಬುವರಿಗೆ ಸೇರಿದ ಅಂದಾಜು 15ಲಕ್ಷ ರೂ. ಗೂ ಅಧಿಕ ಮೌಲ್ಯದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ ಎಂದು ಆರೋಪಸಲಾಗಿದೆ.

ಬೇಗೂರು ಪೊಲೀಸರು ಹಾಗೂ ಪೊಲೀಸ್ ಶ್ವಾನ ದಳ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News