ಚನ್ನಪಟ್ಟಣ ಉಪಚುನಾವಣೆ | ಜೆಡಿಎಸ್‌ ನಾಯಕರ ಜತೆ ಚರ್ಚಿಸಿ ಅಭ್ಯರ್ಥಿ ತೀರ್ಮಾನ : ಬಿ.ವೈ.ವಿಜಯೇಂದ್ರ

Update: 2024-06-21 07:39 GMT

ಬೆಂಗಳೂರು : ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಹಿಂದೆ ಸರಿಯಬೇಕಾದ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಉಪಚುನಾವಣೆಯಲ್ಲಿ ಜೆಡಿಎಸ್‌ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಯೋಗ ದಿನಾಚರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಶಾಸಕರಾಗಿದ್ದರೆ, ಚನ್ನಪಟ್ಟಣದಿಂದ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಜನರ ಮನಸ್ಸಿನಲ್ಲಿ ಏನಿದೆ ಎಂದರೆ ಇನ್ನೂ ನಿಗೂಢ. ಬೆಂಗಳೂರು ಗ್ರಾಮಾಂತರದಲ್ಲಿ ಅವರನ್ನು ಸೋಲಿಸುವವರೇ ಇಲ್ಲ ಎಂದು ಅಂದುಕೊಂಡಿದ್ದರು. ಜನರ ತೀರ್ಪು ಏನು ಅನ್ನುವುದು ಎಲ್ಲರೂ ನೋಡುತ್ತಿದ್ದಾರೆ ಎಂದು ಅವರು ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣ ಎಂಬ ಶಾಸಕ ಬಿ.ಪಿ.ಹರೀಶ್ ಹೇಳಿಕೆಗೆ ಉತ್ತರಿಸಿದ ಅವರು,`ಈ ರೀತಿ ಹೇಳಿಕೆಗಳನ್ನು ಕೊಡುವುದರಿಂದ ಪಕ್ಷಕ್ಕೂ ಲಾಭ ಆಗುವುದಿಲ್ಲ. ಸಂಘಟನೆಗೂ ಲಾಭ ಆಗುತ್ತಿಲ್ಲ’ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News