ಚಿಕ್ಕಮಗಳೂರು: ಅಪಘಾತ ಪ್ರಕರಣ; ಕಾಮಿಡಿ ನಟ ಚಂದ್ರಪ್ರಭಾ ಕಾರು ಪೊಲೀಸ್ ವಶ

Update: 2023-09-08 06:55 GMT

ಚಿಕ್ಕಮಗಳೂರು: ಕಳೆದೆರಡು ದಿನಗಳ ಹಿಂದೆ ನಡೆದ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಕಾಮಿಡಿ ನಟ ಚಂದ್ರಪ್ರಭಾ ಅವರ ಕಾರನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಂದ್ರಪ್ರಭಾ ಅವರು ಅಪಘಾತ ಮಾಡಿ ಗಾಡಿ ನಿಲ್ಲಿಸದೇ ಹೋಗಿದ್ದು, ಅಪಘಾತಕ್ಕೀಡಾದ ಯುವಕನಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಚಿಕ್ಕಮಗಳೂರು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಂದು ಠಾಣೆಗೆ ಹಾಜರಾದ ಕಾಮಿಡಿ ನಟ ಚಂದ್ರಪ್ರಭಾ ಅವರು ಬಹಿರಂಗ ಕ್ಷಮೆ ಯಾಚಿಸಿದ್ದು, ಯುವಕ ಮದ್ಯ ಸೇವಿಸಿದ್ದಾರೆ ಎಂದು ತಪ್ಪು ಮಾಹಿತಿ‌ ನೀಡಿದ್ದೇನೆ. ಆಸ್ಪತ್ರೆಗೆ ಹೋಗಿ ಯುವಕ ಹಾಗೂ ಆ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ. ಈ ವಿಚಾರಕ್ಕೆ ಆ ಕುಟುಂಬದ ಬಳಿ ಬಹಿರಂಗ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News