ಚಿಕ್ಕಮಗಳೂರು: ಕಾರು-ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2023-12-06 02:53 GMT

ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮೃತ್ಪಟ್ಟಿರುವ ಘಟನೆ ಕಡೂರು ತಾಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತರನ್ನು ನಯನ (26) ಮನು (27) ಎಮದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News