ಕೆಪಿಸಿಸಿ ಕಚೇರಿಗೆ ಜು.6ಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ | ಪಕ್ಷದ ಕಾರ್ಯಕರ್ತರ ಕುಂದು-ಕೊರತೆಗಳ ಆಲಿಕೆ

Update: 2024-07-04 13:17 GMT

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜು.6ರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಕ್ವೀನ್ಸ್‍ರಸ್ತೆಯಲ್ಲಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನವಿಗಳನ್ನು ಸ್ವೀಕರಿಸಲಿದ್ದು ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ.

ಸಿಎಂ ಭೇಟಿಗೆ ಪಕ್ಷದ ಕಾರ್ಯಾಲಯದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಮೊದಲು ಬಂದವರಿಗೆ/ ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಾಟ್ಸ್‌ ಅಪ್ ಮೊಬೈಲ್ ಸಂಖ್ಯೆ 78991 16899ಕ್ಕೆ ತಮ್ಮ ಹೆಸರು, ವಯಸ್ಸು, ವಿಳಾಸ ಹಾಗೂ ಇತರ ಮಾಹಿತಿಯೊಂದಿಗೆ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ಕೆಪಿಸಿಸಿ ಮಾಧ್ಯಮ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News