ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು​​ ಉತ್ತರ ಕೇಳುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ

Update: 2024-09-23 09:37 GMT

ಬೆಂಗಳೂರು : ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ʼಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ನು ಲೋಕಾರ್ಪಣೆʼ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲ ಬಾಷೆಯಲ್ಲಿರುವ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ" ಎಂದು ಹೇಳಿದರು.

ಅರ್ಕಾವತಿಗೆ ಸಂಬಂಧಿಸಿದ ರಾಜ್ಯಪಾಲರ ಪತ್ರ ; ಪರಿಶೀಲಿಸಿ ಕ್ರಮ

ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ ಎಂದು ಮರು ಪ್ರಶ್ನಿಸಿದರು. ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News