ಜಾತ್ಯತೀತ ಮಹಿಳೆ ತೆನೆ ಇಳಿಸಿದ್ದಾಳೆ, ಕಾಂಗ್ರೆಸ್ಸಿಗೆ ಬನ್ನಿ: ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಡಿ.ಕೆ.ಸುರೇಶ್ ಆಹ್ವಾನ

Update: 2024-03-15 12:33 GMT

ಬೆಂಗಳೂರು: ‘ಜಾತ್ಯತೀತ ಜನತಾ ದಳ(ಜೆಡಿಎಸ್)ದ ಮಹಿಳೆ ತನ್ನ ತಲೆಯ ಮೇಲಿದ್ದ ಹುಲ್ಲಿನ ಹೊರೆಯನ್ನು ಇಳಿಸಿದ್ದು, ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಇಂದಿಲ್ಲಿ, ಜೆಡಿಎಸ್ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸಂಸದನಾಗಿ ಕ್ಷೇತ್ರದಲ್ಲಿ ದುಡಿದಿದ್ದೇನೆ, ಅದರ ಕೂಲಿಯನ್ನು ಜನರ ಬಳಿ ಕೇಳುತ್ತಿದ್ದೇನೆ. ಡಾ.ಮಂಜುನಾಥ್ ಸ್ಪರ್ಧೆ ಅವರ ತೀರ್ಮಾನ, ಅವರು ಪ್ರಬಲರಾಗಿದ್ದರೆ ಜೆಡಿಎಸ್ ಚಿಹ್ನೆಯ ಮೇಲೆ ನಿಲ್ಲಿಸಬೇಕಿತ್ತು. ಆದರೆ, ಅವರೇಕೆ ಬಿಜೆಪಿ ಚಿಹ್ನೆಯ ಮೇಲೆ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಾನು ಕ್ಷೇತ್ರದಲ್ಲಿ ಯಾವುದೇ ರಾಗ, ದ್ವೇಷವಿಲ್ಲದೆ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು, ಮುಂದೆಯೂ ಮಾಡಲು ಉದ್ದೇಶಿಸಿದ್ದೇನೆ. ಹೀಗಾಗಿಯೇ ನನಗೆ ಬೆಂಬಲ ಕೊಡಿ ಎಂದು ಕೇಳುತ್ತಿದ್ದೇನೆ. ಜೆಡಿಎಸ್ ಕಾರ್ಯಕರ್ತರನ್ನು ಮುಕ್ತ ಮನಸ್ಸಿನಿಂದ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿದ್ದೇನೆ. ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಅವರು ಕೋರಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News