ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಿಎಂ ಸಿದ್ದರಾಮಯ್ಯ

Update: 2023-06-30 15:49 GMT

ಬೆಂಗಳೂರು, ಜೂ.30: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಎಚ್.ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮುನ್ನವೆ ಕೆಈ, ಆರ್‍ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ.ಇನ್ನೂ, ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಎಚ್.ಕೆ.ಮಲ್ಲೇಶ್ ಗೌಡ, ಖಜಾಂಚಿ ತಿಪ್ಪೇಶಪ್ಪ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News