‘ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ’ಗೆ ಅರ್ಹ ಪತ್ರಕರ್ತರ ಆಯ್ಕೆಗೆ ಸಮಿತಿ ರಚನೆ
Update: 2024-10-09 15:04 GMT
ಬೆಂಗಳೂರು: ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ‘ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ’ಗೆ ಅರ್ಹರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬುಧವಾರ ವಾರ್ತಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಆದೇಶ ಹೊರಡಿಸಿದ್ದು, ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅಧ್ಯಕ್ಷತೆಯ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು, ಕ.ಮ.ರವಿಶಂಕರ್, ಎಂ.ಸಿ.ಶೋಭಾ, ಜೆ.ಅಬ್ಬಾಸ್ ಮುಲ್ಲಾ, ಎನ್.ರವಿಕುಮಾರ್ (ಟೆಲೆಕ್ಸ್), ವಾರ್ತಾ ಇಲಾಖೆ ಆಯುಕ್ತರು ಹಾಗೂ ಜಂಟಿ ನಿರ್ದೇಶಕರು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ.