ನಿರ್ಮಾಪಕರ ವಿರುದ್ಧ ದೂರು | ನಟ ಸುದೀಪ್ ಹೇಳಿಕೆ ದಾಖಲು: ಆದೇಶ ಕಾಯ್ದಿರಿಸಿದ ಕೋರ್ಟ್

Update: 2023-08-10 17:19 GMT

ಬೆಂಗಳೂರು, ಆ.10: ಕನ್ನಡ ಚಲನಚಿತ್ರ ನಟ ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್. ಕುಮಾರ್ ಹಾಗೂ ಎನ್.ಎಂ.ಸುರೇಶ್ ವಂಚನೆಯ ಆರೋಪ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಸುದೀಪ್ ಅವರು ಕೋರ್ಟ್ ಕಟಕಟೆಯಲ್ಲಿ ನಿಂತು ಈ ಇಬ್ಬರು ನಿರ್ಮಾಪಕರ ವಿರುದ್ಧ ಹೇಳಿಕೆ ದಾಖಲಿಸಿದ್ದಾರೆ.  

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ಪ್ರಮಾಣಿತ ಹೇಳಿಕೆಯನ್ನ ಸುದೀಪ್ ದಾಖಲಿಸಿದರು. ಸುದ್ದಿಗೋಷ್ಠಿ ವೇಳೆ ನಿರ್ಮಾಪಕ ಎಂ.ಎನ್.ಕುಮಾರ್ ಮಾಡಿದ ಆರೋಪಗಳೆಲ್ಲಾ ಸುಳ್ಳು. ಆರ್ ಆರ್ ನಗರದಲ್ಲಿ ಮನೆ ಕಟ್ಟಲು ನಾನು ಹಣದ ನೆರವು ಪಡೆದಿಲ್ಲ. ಈ ಆರೋಪ ಸುಳ್ಳು. ಮನೆ ದುರಸ್ತಿಗೆ ಹಣ ನೀಡಿದ್ದಾಗಿ ಆರೋಪ ಮಾಡಿದ್ದಾರೆ. ಇದೂ ಕೂಡ ಸುಳ್ಳು ಎಂದು ಸುದೀಪ್ ಹೇಳಿಕೆಯನ್ನು ನೀಡಿದರು.

ನಿರ್ಮಾಪಕ ಎಂ.ಎನ್.ಕುಮಾರ್ ಹೇಳಿಕೆಯನ್ನು ಮತ್ತೋರ್ವ ನಿರ್ಮಾಪಕ ಎಂ.ಎನ್. ಸುರೇಶ್ ಬೆಂಬಲಿಸಿದ್ದಾರೆ. ಈ ಇಬ್ಬರು ನಿರ್ಮಾಪಕರ ಸುದ್ದಿಗೋಷ್ಠಿಯಿಂದ ನನ್ನ ಮಾನಹಾನಿಯಾಗಿದೆ. ಈ ಬಗ್ಗೆ ಹಲವರು ನನ್ನನ್ನು ಪ್ರಶ್ನಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ವಿವರಣಾತ್ಮಕ ಹೇಳಿಕೆಯನ್ನ ಸುದೀಪ್ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News