ಕಾಂಗ್ರೆಸ್ ನಿಜಬಣ್ಣವನ್ನು ದೇಶದ ಮುಂದೆ ತೆರೆದಿಟ್ಟಿದ್ದಾರೆ: ಬಿ.ವೈ.ವಿಜಯೇಂದ್ರ

Update: 2024-01-10 14:15 GMT

ಬೆಂಗಳೂರು: ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿರುವ ಕಾಂಗ್ರೆಸ್ , ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ ಸಂಗತಿ ಎನಿಸಿಲ್ಲ, ಕಾಂಗ್ರೆಸ್ ನಿರ್ಧಾರ ರಾಮಭಕ್ತರಿಗೆ ಅನಿರೀಕ್ಷಿತವಲ್ಲ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ ಪಕ್ಷದ ನಿರ್ಣಯ ನಿರೀಕ್ಷಿತವೇ ಆಗಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದ್ದ ಕಾಂಗ್ರೆಸ್ ಪಕ್ಷದವರು, ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಸರಕಾರ ವಜಾ ಮಾಡಿತ್ತು. ರಾಮಭಕ್ತರಿಗೆ ತೊಂದರೆ ಕೊಡುತ್ತಿದ್ದ ಕಾಂಗ್ರೆಸ್ಸಿಗರ ಈ ನಿರ್ಣಯ ಯಾರಿಗೂ ಆಶ್ಚರ್ಯ ತಂದು ಕೊಟ್ಟಿಲ್ಲ ಎಂದರು.

ಜನವರಿ 22ರಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುವಂತೆ ಕಾಂಗ್ರೆಸ್ ಸರಕಾರ ಸುತ್ತೋಲೆ ಹೊರಡಿಸಿತ್ತು. ನಾಳೆ ಅಥವಾ ನಾಡಿದ್ದು ಈ ಆದೇಶವನ್ನು ಹಿಂದಕ್ಕೆ ಪಡೆಯಬಹುದು. ಇವರಿಗೆ ರಾಮನ ಬಗ್ಗೆ ಭಕ್ತಿ-ಶ್ರದ್ಧೆ ಇಲ್ಲ. ಅಲ್ಪಸಂಖ್ಯಾತರ ತುಷ್ಟೀಕರಭಣದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಪಕ್ಷದವರಿಗೆ ಬುದ್ಧಿ ಬಂದಿಲ್ಲ, ಬುದ್ಧಿ ಬರುವುದೂ ಇಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News