ಸಂವಿಧಾನ, ಶರಣ ಸಾಹಿತ್ಯದ ಆಶಯ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-11-16 13:02 GMT

ಬೆಂಗಳೂರು, ನ.16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಗುರುವಾರ ನಗರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 18ನೆ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ ‘ಕ್ಷಣ ಹೊತ್ತು ಅಣಿಮುತ್ತು’ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂತಹ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕøತಿ ಅಂದರೆ ಮಾನವೀಯ ಸಂಸ್ಕøತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕøತಿ ಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು ಎಂದು ಅವರು ಹೇಳಿದರು.

ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳು ಎಂಬ ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ, ಅಲ್ಪ ಮಾನವರಾಗಬಾರದು. ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೋ.ರು.ಚನ್ನಬಸಪ್ಪ, ರಮಣಶ್ರೀ ಪ್ರತಿμÁ್ಠನದ ಅಧ್ಯಕ್ಷ ಎಸ್.ಷಡಕ್ಷರಿ, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ಮತ್ತು ರವಿಹೆಗಡೆ, ಲೇಖಕಿ ವೀಣಾ ಬನ್ನಂಜೆ, ಕಸಪಾ ಮಾಜಿ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News