ರಾಜ್ಯ ಬಜೆಟ್ ಗೆ ಕ್ಷಣಗಣನೆ: 15ನೇ ಬಾರಿ ಆಯವ್ಯಯ ಮಂಡಿಸಲಿರುವ ಸಿದ್ದರಾಮಯ್ಯ

Update: 2024-02-16 04:12 GMT

ಬೆಂಗಳೂರು, ಫೆ.16: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಣಕಾಸು ಇಲಾಖೆಯ ಕಾರ್ಯದರ್ಶಿ ಎಲ್.ಅತೀಕ್ ಅವರು ಬಜೆಟ್ ಪುಸ್ತಕದ ಪ್ರಗತಿಯನ್ನು ಇಂದು ಬೆಳಗ್ಗೆ ಹಸ್ತಾಂತರ ಮಾಡಿದರು. ಈ ವೇಳೆ ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು

ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಇಂದು ಬೆಳಗ್ಗೆ 10:15ಕ್ಕೆ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News