ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Update: 2023-07-02 07:26 GMT

ದಾವಣಗೆರೆ, ಜು.2: ನಗರದ ಹೊರ ವಲಯದ ಜಿಲ್ಲಾಧಿಕಾರಿ ಕಚೇರಿ ಬಳಿಯ ಜಿಎಂಐಟಿ ಹಿಂಭಾಗದಲ್ಲಿ ಕಿಡಿಗೇಡಿಯೊಬ್ಬ ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದಿರುವ ಪ್ರಕರಣ ಶನಿವಾರ ಮಧ್ಯಾಹ್ನ ವರದಿಯಾಗಿದೆ.

ಧಾರವಾಡದಿಂದ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ದಾವಣಗೆರೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕಿಡಿಗೇಡಿ ಕಲ್ಲು ಹೊಡೆದು ಪರಾರಿಯಾಗಿದ್ದಾನೆ. ಕಲ್ಲಿನ ರಭಸಕ್ಕೆ ರೈಲಿನ ಗಾಜಿನ ಕಿಟಕಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ರೈಲ್ವೆ ಆ‌ ಪಿಎಫ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News