BJP ಜೊತೆ ಮೈತ್ರಿಗೆ ದೇವೇಗೌಡರಿಗೆ ಇಷ್ಟವಿರಲಿಲ್ಲ; ಕುಮಾರಸ್ವಾಮಿ ಬಲವಂತ ಮಾಡಿ ಒಪ್ಪಿಸಿದ್ದಾರೆ: ಸಚಿವ ಚಲುವರಾಯಸ್ವಾಮಿ

Update: 2023-10-03 10:39 GMT

ಕಲಬುರಗಿ: ʼʼಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ‌ಮಾಡಿಕೊಳ್ಳುವ ಬಗ್ಗೆ ಎಚ್.ಡಿ. ದೇವೇಗೌಡರಿಗೆ ಇಷ್ಟವಿರಲಿಲ್ಲ. ಅವರು ಯಾವತ್ತಾದರೂ ಬಿಜೆಪಿ ಬಗ್ಗೆ ಒಲವು ತೋರಿಸಿದ್ರಾ ? ಎಚ್.ಡಿ.ಕುಮಾರಸ್ವಾಮಿ ದೇವೇಗೌಡರನ್ನು ಬಲವಂತ ಮಾಡಿ ಮೈತ್ರಿಗೆ ಒಪ್ಪಿಸಿದ್ದಾರೆʼʼ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ʼʼಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗುತ್ತೆ. ಮಾಜಿ ಪ್ರಧಾನಿ ಎಚ್‌ ಡಿ ದೇವೆಗೌಡರು ಯಾವತ್ತಾದರೂ ಬಿಜೆಪಿ ಬಗ್ಗೆ ಒಲವು ತೋರಿಸಿದ್ರಾ ? ಅವರು ಯಾವ ವೇದಿಕೆಯಲ್ಲೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿರಲಿಲ್ಲ. ಮಗನ ಬಲವಂತ, ಹಿಂಸೆಯಿಂದ ದೇವೆಗೌಡರು ಮೈತ್ರಿಗೆ ಒಪ್ಪಿಕೊಂಡಿದ್ದಾರೆʼʼ ಎಂದು ದೂರಿದರು.

ʼʼಜೆಡಿಎಸ್-ಬಿಜೆಪಿ ಮೈತ್ರಿಯಿಂ ಕಾಂಗ್ರೆಸ್ ಗೆ ಯಾವುದೇ ಭಯ ಇಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆʼʼ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News