ದಿನೇಶ್ ಗುಂಡೂರಾವ್ ಟೀಕಿಸುವ ಭರದಲ್ಲಿ ಅವರ ಪತ್ನಿಯ ಹೆಸರು ಬಳಕೆ : ಬಿಜೆಪಿ ಮುಖಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು

Update: 2024-10-05 14:57 GMT

ಬೆಂಗಳೂರು : ರಾಜಕೀಯ ವಾಕ್ಸಮರದಲ್ಲಿ ಅನಗತ್ಯವಾಗಿ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬುರಾವ್ ಅವರ ಹೆಸರನ್ನು ಎಳೆದು ತರುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಸರವಣನ್ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ರಾಜಕೀಯ ಪಕ್ಷಗಳ ಆರೋಪ ಮತ್ತು ಪ್ರತ್ಯಾರೋಪಗಳ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಅನಗತ್ಯವಾಗಿ ತಬುರಾವ್ ಅವರ ಹೆಸರನ್ನು ಎಳೆದು ತಂದು ಕೋಮು ಸೌಹಾರ್ದತೆಯನ್ನು ಪ್ರಚೋದಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಬುರಾವ್ ಅವರು ರಾಜಕೀಯದಲ್ಲಿಲ್ಲ ಹಾಗೂ ಅವರಿಗೂ ರಾಜಕೀಯ ವಿದ್ಯಮಾನಗಳಿಗೂ ಯಾವುದೇ ಸಂಬಂಧವಿರುವುದಿಲ್ಲ. ಇತ್ತೀಚೆಗೆ ಸಾವರ್ಕರ್ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಅನಗತ್ಯವಾಗಿ ಬಿಜೆಪಿ ಪಕ್ಷದ ಅಧಿಕೃತ ಟ್ವೀಟ್‌ನಲ್ಲಿ ತಬುರಾವ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದು ಒಂದು ಧರ್ಮವನ್ನು, ಜನಾಂಗವನ್ನು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿ ಸಾಮರಸ್ಯವನ್ನು ಹಾಳು ಮಾಡುವ ಕೆಲಸವಾಗಿದ್ದು, ಈ ರೀತಿ ಸೌಹಾರ್ದತೆಯನ್ನು ಪ್ರಚೋದಿಸುವ ಕೆಲಸವನ್ನು ಮಾಡುತ್ತಿರುವ ಬಿಜೆಪಿ ಮುಖಂಡರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News