ʼಕರ್ನಾಟಕ ಬಂದ್‍ʼಗೆ ಸರಕಾರದ ಬೆಂಬಲವಿಲ್ಲ: ಡಿ.ಕೆ.ಶಿವಕುಮಾರ್

Update: 2025-03-20 21:32 IST
ʼಕರ್ನಾಟಕ ಬಂದ್‍ʼಗೆ ಸರಕಾರದ ಬೆಂಬಲವಿಲ್ಲ: ಡಿ.ಕೆ.ಶಿವಕುಮಾರ್
  • whatsapp icon

ಬೆಂಗಳೂರು : ಕನ್ನಡ ಸಂಘಟನೆಗಳು ಮಾರ್ಚ್ 22ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‍ಗೆ ಸರಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ ಕಲಾಪ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿಷಯ ಪ್ರಸ್ತಾಪ ಮಾಡಿದರು.

ಮಾರ್ಚ್ 22ರಂದು ಕನ್ನಡ ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಅದೇ ದಿನ ಎಸೆಸೆಲ್ಸಿ ಸೇರಿ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳಿಗೆ ತೊಂದರೆಯಾಗಲಿದ್ದು, ಸರಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಸದ್ಯಕ್ಕೆ ಈ ಬಂದ್ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರಕಾರದ ಜೊತೆ ಮಾತಾಡಬೇಕಿತ್ತು. ಬಂದ್‍ಗೆ ನಾವು ಬೆಂಬಲ ಕೊಡುವುದಿಲ್ಲ. ನಾವು ಬಂದ್ ಮಾಡುವವರಿಗೆ ತಿಳುವಳಿಕೆ ಕೊಡುತ್ತೇವೆ. ಅಧಿಕಾರಿಗಳ ಜೊತೆ ಮಾತಾಡಿ ಮತ್ತೊಮ್ಮೆ ಹೇಳಿಕೆ ಕೊಡುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News