ಪಾದಯಾತ್ರೆಯ ಪ್ರತಿದಿನವೂ ಬಿಜೆಪಿಯ ಒಂದೊಂದು ಹಗರಣ ಬಯಲು : ಡಿ.ಕೆ.ಶಿವಕುಮಾರ್

Update: 2024-07-26 13:05 GMT

PC : x/@DKShivakumar

ಬೆಂಗಳೂರು : ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಜತೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದರು.

ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ. ಅವರ ಕಾಲದ ಅಕ್ರಮಗಳಲ್ಲಿ ಸಿಎಂ ಆಗಿದ್ದ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ ಎಂದು ಶಿವಕುಮಾರ್ ಹೇಳಿದರು.

ಅಕ್ರಮಗಳ ಬಗ್ಗೆ ಬಹಿರಂಗ ಚರ್ಚೆ ಬನ್ನಿ...!

ಬಿಜೆಪಿಯವರು ತಮ್ಮ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ. ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಯಾರಾದರೂ ಚರ್ಚೆಗೆ ಬರಲಿ ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದು ಶಿವಕುಮಾರ್ ಸವಾಲೆಸೆದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News