ಕುತೂಹಲ ಮೂಡಿಸಿದ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್‌ ನಾಯಕ ಆಯನೂರು ಮಂಜುನಾಥ್ ಭೇಟಿ

Update: 2023-08-20 05:29 GMT

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್‌ ನ ಅತೃಪ್ತ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿದ್ದು, ಈ ನಡುವೆ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರು, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ರವಿವಾರ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಗರದ ಸದಾಶಿವನಗರ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಆಯನೂರು ಮಂಜುನಾಥ್ ಕೆಲ ಕಾಲ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. 

ವಿಧಾನಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್‌ ಅದಕ್ಕಾಗಿ ವಿಧಾನ ಪರಿಷತ್‌ನ ತಮ್ಮ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಮಟ್ಟದಲ್ಲಿ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಕೊನೆಗೆ ಜೆಡಿಎಸ್‌ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು.  

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News