ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪತನ: ಯತ್ನಾಳ್ ಭವಿಷ್ಯ

Update: 2023-08-14 16:29 GMT

ಬೆಂಗಳೂರು, ಆ. 14: ‘ಲೋಕಸಭೆ ಚುನಾವಣೆ ವೇಳೆಗೆ ಅಥವಾ ಆ ಬಳಿಕ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ಹಣೆ ಬರಹ ಗೊತ್ತಾಗಲಿದೆ’ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಸೋಮವಾರ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಮಿತಿಮೀರಿದ್ದು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಬ್ಬ ಗುತ್ತಿಗೆದಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ’ ಎಂದು ಹೇಳಿದರು.

ಈ ಹಿಂದೆ ಬಿಜೆಪಿ ಅವಧಿಯಲ್ಲಿ ಕೆ.ಎಸ್.ಈಶ್ವರಪ್ಪನವರ ಮೇಲೆ ಆಪಾದನೆ ಬಂದಾಗ ಅವರು ರಾಜೀನಾಮೆ ನೀಡಿದ್ದರು. ಅದೇ ರೀತಿಯ ನಿರ್ಧಾರವನ್ನು ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳುವರೇ? ಎಂದು ಪ್ರಶ್ನಿಸಿದ ಯತ್ನಾಳ್, ನೈತಿಕತೆ ಇದ್ದರೆ ಕೂಡಲೇ ಡಿಕೆಶಿ ರಾಜಿನಾಮೆ ನೀಡಬೇಕು ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಸರಕಾರ ಪತನಗೊಳ್ಳುವುದು ಖಚಿತ. ನೀವು ಮನೆಗೆ ಹೋಗುವುದು ನಿಶ್ಚಿತ. ರಾಜ್ಯದಲ್ಲಿ ವರ್ಗಾವಣೆ ದಂಧೆ, ಗ್ಯಾರಂಟಿ ಯೋಜನೆಯಲ್ಲಿ ಮೋಸ, ಶಾಸಕರಲ್ಲಿನ ಅಸಮಾಧಾನ ಹಾಗೂ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದಿರುವುದು ಸರಕಾರ ಪತನಕ್ಕೆ ಕಾರಣವಾಗಲಿದೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News