ಚಿಕ್ಕಮಗಳೂರು: ಕ್ರಿಕೆಟ್ ಆಡುವಾಗ ಕ್ಷುಲ್ಲಕ ವಿಚಾರಕ್ಕೆ ಜಗಳ; ಯುವಕನಿಗೆ ಮಾರಣಾಂತಿಕ ಹಲ್ಲೆ

Update: 2023-09-03 17:33 GMT

ಚಿಕ್ಕಮಗಳೂರು: ಕ್ರಿಕೆಟ್ ಆಡುತ್ತಿದ್ದ ಎರಡು ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಒಂದು ತಂಡದ ಯುವಕ ಮತ್ತೊಂದು ತಂಡದ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರವಿವಾರ ಸಂಜೆ ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ನಡೆದಿದೆ.

ರವಿವಾರ ಸಂಜೆ ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ಎರಡು ತಂಡಗಳ ಯುವಕರು ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ತಂಡಗಳ ನಡುವೆ ಗಲಾಟೆ ಸಂಭವಿಸಿದೆ. ಈ ವೇಳೆ ಎರಡು ತಂಡಗಳ ಯುವಕರು ವಾಗ್ವಾದ ನಡೆಸಿ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ಸಂದರ್ಭ ಒಂದು ತಂಡದ ನಾಲ್ವರು ಯುವಕರು ಮತ್ತೊಂದು ತಂಡದ ಯುವಕ ಇಬ್ಬು ಎಂಬಾತನನ್ನು ಗುರಿಯಾಗಿಸಿಕೊಂಡು ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪರಿಣಾಮ ಇಬ್ಬು ಎದೆ ಹಾಗೂ ಹೊಟ್ಟೆಗೆ ಗಂಭೀರವಾಗಿ ಗಾಯವಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News