ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಬೆಂಕಿ: ಆ.31ರೊಳಗೆ ವರದಿ ಸಲ್ಲಿಸಲು ಸೂಚನೆ‌

Update: 2023-08-12 15:31 GMT

ಬೆಂಗಳೂರು, ಆ.12: ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಆ.31ರೊಳಗೆ ಬಿಬಿಎಂಪಿ ಅಭಿಯಂತರ ಬಿ.ಎಸ್. ಪ್ರಹ್ಲಾದ್ ಅವರಿಗೆ ತಾಂತ್ರಿಕ ವಿಚಾರಣೆ ವರದಿಯನ್ನು ಸಲ್ಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಶನಿವಾರ ಈ ಕುರಿತು ಆದೇಶವನ್ನು ಹೊರಡಿಸಿರುವ ಅವರು, ಆ.11ರಂದು ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದ್ದು, 9 ಮಂದಿಗೆ ಗಾಯವಾಗಿದೆ. ಬೆಂಕಿ ಬಿದ್ದಿದಕ್ಕೆ ಕಾರಣಗಳನ್ನು ತಜ್ಞರಿಂದ ಪಡೆದು ವರದಿಯನ್ನು ನೀಡಬೇಕು ಎಂದು ಬಿ.ಎಸ್. ಪ್ರಹ್ಲಾದ್ ಅವರಿಗೆ ನಿರ್ದೇಶಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News