ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Update: 2023-11-08 06:30 GMT

ಬೆಂಗಳೂರು: ಮಾಜಿ ುಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು. 

ʼರಾಜ್ಯದಲ್ಲಿ ತೀವ್ರ ಬರಗಾಲದಿಂದ ಜನರು ಮತ್ತು ಕೃಷಿಕರು ಕಂಗೆಟ್ಟಿದ್ದಾರೆ. ಇಷ್ಟಾದರೂ ಕೂಡ ಕರ್ನಾಟಕದ ಕಾಂಗ್ರೆಸ್ ಸರಕಾರವು ಬರ ಪರಿಹಾರವನ್ನು ನೀಡುವುದರಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರವು ಕರ್ನಾಟಕಕ್ಕೆ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕುʼ ಎಂದು ಈಶ್ವರಪ್ಪ ಅವರ ನೇತೃತ್ವದ ತಂಡವು  ಜೆ.ಪಿ.ನಡ್ಡಾ ಅವರಲ್ಲಿ ಮನವಿ ಮಾಡಿತು.

ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ತಂಡದಲ್ಲಿ ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇದ್ದರು.

ಇದನ್ನೂ ಓದಿ >>> ಜೆ.ಪಿ. ನಡ್ಡಾ ಭೇಟಿಗೆ ಸಿಗದ ಅವಕಾಶ; ಡಿ. ವಿ. ಸದಾನಂದ ಗೌಡ ಬೆಂಗಳೂರಿಗೆ ವಾಪಸ್

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News