ಶಾಲೆ, ಹಾಸ್ಟೆಲ್ ಹಂತದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಲು ವಿಚಕ್ಷಣಾ ದಳ ರಚನೆ: ಸಚಿವ ಎಚ್.ಸಿ.ಮಹದೇವಪ್ಪ

Update: 2023-12-22 15:10 GMT

ಮೈಸೂರು: ಶಾಲೆ, ಹಾಸ್ಟೆಲ್ ಹಂತದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಲು ವಿಚಕ್ಷಣ ದಳ ರಚಿಸಲು ಸೂಚಿಸಿದ್ದೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಶವಂತಪುರದಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆ, ಹಾಸ್ಟೆಲ್ ಹಂತದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗುವುದಿಲ್ಲ, ಹಾಗಾಗಿ ಅಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ವಿಚಕ್ಷಣಾ ದಳ ರಚಿಸುವುದಾಗಿ ತಿಳಿಸಿದರು.

ಯಶವಂತಪುರದ ಘಟನೆ ನನ್ನ ಗಮನಕೆಕ ಬಂದಿಲ್ಲ. ಅಲ್ಲೊಂದು ಇಲ್ಲೊಂದು ಇಂತಹ ಘಟನೆಗಳು ನಡೆಯುತ್ತವೆ. ಅದನ್ನೆ ಸಾಮಾನ್ಯೀಕರಣ  ಮಾಡೋದು ಬೇಡ. ನಾವು ಈ ವಿಷಯದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News