ಹನೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2023-10-22 09:46 GMT

ಹನೂರು, ಅ.22: ಬಳಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಹನೂರು ಪಟ್ಟಣದ ಹೊರವಲಯದ ಹುಣಸೆ ಗುಡ್ಡೆ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಮೃತರನ್ನು ಕಣ್ಣೂರು ಗ್ರಾಮದ ನಂದೀಶ್ (25) ಎಂದು ಗುರುತಿಸಲಾಗಿದೆ.

ನಂದೀಶ್ ಬೈಕಿನಲ್ಲಿ ತಮ್ಮ ಸ್ವ ಗ್ರಾಮವಾದ ಹನೂರು ತಾಲೂಕಿನ ಕಣ್ಣುರು ಗ್ರಾಮದ ಮನೆಗೆ ತಡ ರಾತ್ರಿ 12 ಗಂಟೆ ವೇಳೆ ಹೋಗುತ್ತಿದ್ದ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ

ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಹನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News