ಹಾಸನ: ಹಾಡಹಗಲೇ ಮಾಜಿ ಸಚಿವ ಎಚ್.ಡಿ ರೇವಣ್ಣರ ಆಪ್ತನ ಹತ್ಯೆ

Update: 2023-08-09 11:17 GMT

ಹಾಸನ: ಹಾಡಹಗಲೇ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿದ ಘಟನೆ ನಗರದ ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ವರದಿಯಾಗಿದೆ. 

ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತ ಹಾಗೂ ಶ್ರೀರಾಮ ಮಾರ್ಬಲ್ಸ್ ಮಾಲಕ ಕೃಷ್ಣೇಗೌಡ ಕೊಲೆಗೀಡಾದವರು ಎಂದು ತಿಳಿದು ಬಂದಿದೆ. 

ದುಷ್ಕರ್ಮಿಗಳ ಗುಂಪೊಂದು ಕೃಷ್ಣೇಗೌಡರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದೆ ಎನ್ನಲಾಗಿದೆ. 

ಕೃಷ್ಣೇಗೌಡರ ಗ್ರಾನೈಟ್ ಫ್ಯಾಕ್ಟರಿಯ ಎದುರೇ ಈ ಘಟನೆ ನಡೆದಿದ್ದು, ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News