ಹಾಸನ: ಕಾಡಾನೆ ದಾಳಿಗೆ ಬಲಿಯಾದ ಅರ್ಜುನ ಆನೆಯ ಅಂತ್ಯಸಂಸ್ಕಾರ

Update: 2023-12-05 10:25 GMT

ಹಾಸನ: ಒಂಟಿಸಲಗಗಳ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಯಿಂದ ಗಾಯಗೊಂಡು ಮೃತಪಟ್ಟಿದ್ದ ಅರ್ಜುನ ಆನೆಯ ಅಂತ್ಯಸಂಸ್ಕಾರವನ್ನು ಹಾಸನ ಜಿಲ್ಲೆಯ ದಬ್ಬಳ್ಳಿಕಟ್ಟೆಯಲ್ಲಿ ನೆರವೇರಿಸಲಾಯಿತು.

ಸೋಮವಾರ ಸಕಲೇಶಪುರದ ಎಳಸೂರು ಬಳಿ ಕಾಡಾನೆಗಳ ಸೆರೆ ಕಾರ್ಯಾಚರಣೆಗೆ ವೇಳೆ ಕಾಡಾನೆಯೊಂದು ಕೊಂಬಿನಿಂದ ತಿವಿದಿದ್ದರಿಂದ ಅರ್ಜುನ ಆನೆ ಮೃತಪಟ್ಟಿತ್ತು.

ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ನಾಯಕನಾಗಿ ಮುನ್ನಡೆಸುತ್ತಿದ್ದ ಅರ್ಜುನ ಆನೆಗೆ 63 ವರ್ಷ ವಯಸ್ಸಾಗಿತ್ತು.

ಈ ಹಿನ್ನೆಲೆಯಲ್ಲಿ ಕಳೆದ ವರ್ಷದಿಂದ ಚಿನ್ನದ ಅಂಬಾರಿಯನ್ನು ಹೊರಿಸುತ್ತಿರಲಿಲ್ಲ. ಆದರೆ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಇದನ್ನು ಬಳಸಿಕೊಳ್ಳಲಾಗುತ್ತಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News