ಹಾಸನ: ಸಿನಿಮೀಯ ರೀತಿಯಲ್ಲಿ ಶಾಲಾ‌ ಶಿಕ್ಷಕಿಯ ಅಪಹರಣ

Update: 2023-11-30 07:08 GMT

ಹಾಸನ ನ.30: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿರುವ ಘಟನೆ ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.

ಕನಕ ಜಯಂತಿ ಹಿನ್ನಲೆ ಶಾಲೆ ರಜೆ ಇತ್ತು. ಆದರೆ ಕಾರ್ಯಕ್ರಮ ಇದ್ದುದರಿಂದ ಬೆಳಿಗ್ಗೆಯೇ ಶಾಲೆಗೆ ಹೊರಟಿದ್ದ ಶಿಕ್ಷಕಿ ಅರ್ಪಿತಾ ಅವರನ್ನು ಶಾಲೆಯ ಮುಖ್ಯ ದ್ವಾರದ ಬಳಿಯೇ ಅಪಹರಣ ಮಾಡಿದ್ದಾರೆ ಎನ್ನಲಾಗಿದೆ.

15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದು, ಈ ವೇಳೆ ಶಿಕ್ಷಕಿ ಅರ್ಪಿತಾ ಹಾಗೂ ಮನೆಯವರು ಒಪ್ಪಿಗೆ ಸೂಚಿಸಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಅರ್ಪಿತಾ ಅವರನ್ನು ರಾಮು ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಅಪಹರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಲ್ಲದೇ ಘಟನೆಯ ಪ್ರತ್ಯಕ್ಷದರ್ಶಿ ಕೂಡ ಇದ್ದಾರೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದಾರೆ.








Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News