ಲೈವ್ ಸ್ಟ್ರೀಮಿಂಗ್‍ಗೆ ನಿರ್ಬಂಧ ಹೇರಿದ ಹೈಕೋರ್ಟ್: ಕಾರಣವೇನು ಗೊತ್ತೇ?

Update: 2023-12-05 14:00 GMT

ಬೆಂಗಳೂರು: ಕರ್ನಾಟಕ ಹೈಕೋರ್ಟ್‍ನ ಕೆಲವು ಕೋರ್ಟ್‍ಗಳಲ್ಲಿನ ವಿಡಿಯೋ ಕಾನ್ಫರೆನ್ಸ್ ವೇಳೆ ಅನುಚಿತ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೋ ಕಾನ್ಫರೆನ್ಸ್ ಅನ್ನು ಹೈಕೋರ್ಟ್ ಮಂಗಳವಾರ ನಿರ್ಬಧಿಸಿದೆ.

ಈ ಸಂಬಂಧ ಮುಕ್ತ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ‘ನಾವು ಎಲ್ಲ ಲೈವ್ ಸ್ಟ್ರೀಮಿಂಗ್‍ಗಳನ್ನು ನಿರ್ಬಧಿಸುತ್ತಿದ್ದೇವೆ. ವಿಡಿಯೋ ಕಾನ್ಫರೆನ್ಸ್ ಗೂ ಅವಕಾಶ ಇರುವುದಿಲ್ಲ. ದುರದೃಷ್ಟವಶಾತ್ ತಂತ್ರಜ್ಞಾನ ದುರ್ಬಳಕೆ ಅಥವಾ ಕೆಲವರಿಂದ ಅನುಚಿತ ವರ್ತನೆ ನಡೆದಿದೆ ಎಂದರು.

ಇದೆಲ್ಲದರ ನಡುವೆ ಕರ್ನಾಟಕ ಹೈಕೋರ್ಟ್ ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತೃತ ನೆಲೆಯಲ್ಲಿ ತಂತ್ರಜ್ಞಾನ ಬಳಕೆ ಮಾಡುವುದರ ಪರವಾಗಿ ಕರ್ನಾಟಕ ಹೈಕೋರ್ಟ್ ಇರಲಿದೆ. ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು, ನಮಗೆ ಸಹಕರಿಸಬೇಕು. ಈ ಸಂಬಂಧ ಕಂಪ್ಯೂಟರ್ ತಂಡ ಅಥವಾ ರಿಜಿಸ್ಟ್ರಾರ್ ಗೆ ದೂರು ಕೊಂಡೊಯ್ಯಬೇಡಿ. ವ್ಯವಸ್ಥೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಮಾಧ್ಯಮದವರಿಗೆ ವಿಚಾರ ತಿಳಿಸಿ, ನಮಗೆ ಸಹಕರಿಸಿ’ ಎಂದು ಕೋರಿದರು.

ಆನಂತರ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ‘ಸೈಬರ್ ಭದ್ರತಾ ಕಾರಣಗಳಿಗಾಗಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿನ ಎಲ್ಲ ಕಡೆ ವಿಡಿಯೋ ಕಾನ್ಫರೆನ್ಸ್ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ’ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News