ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್

Update: 2023-09-24 13:58 GMT

ಬೆಂಗಳೂರು, ಸೆ.24: ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನಿರಾಕರಿಸಿದೆ.

ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಧೀನ ನ್ಯಾಯಾಲಯದ ಆದೇಶದಲ್ಲಿ ಬದಲಾವಣೆ ಮಾಡುವಂತೆ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಶಾಸಕನಾಗಿರುವ ಕಾರಣಕ್ಕಾಗಿ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ನೀಡಬೇಕು ಎಂದು ವಿನಯ್ ಕುಲಕರ್ಣಿ ಕೋರಿದ್ದರು. ಈ ಹಿಂದೆ ಸತ್ರ ನ್ಯಾಯಾಲಯ, ಹೈಕೋರ್ಟ್ ಕುಲಕರ್ಣಿ ಕೋರಿಕೆಯನ್ನು ವಜಾಗೊಳಿಸಿದ್ದವು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ವಾದಿಸಿದ್ದರು. ಸಿಬಿಐ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News