ಗೋಮಾಳ ಒತ್ತುವರಿ ಆರೋಪ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Update: 2024-05-23 17:21 GMT

ಬೆಂಗಳೂರು: ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನು ಅನಧಿಕೃತವಾಗಿ ಒತ್ತುವರಿ ಮಾಡಲಾಗಿದ್ದನ್ನು ತೆರವು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದೊಡ್ದಬಳ್ಳಾಪುರ ನಿವಾಸಿ ರಾಮು ನೇರಳಗಟ್ಟ ಮತ್ತು ಎಚ್.ಕಾಂತರಾಜು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಹಾಗೂ ಡಿ. ರಾಮಚಂದ್ರ ಹುದ್ದಾರ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೇ ನಂ 57, 58 ಮತ್ತು 60ರ ಸರ್ಕಾರಿ ಗೋಮಾಳ ಜಮೀನಿನನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ.

ಜಾಗದ ಸುತ್ತಲೂ ಸಿಮೆಂಟ್ ಕಪೌಂಡ್ ಗಳನ್ನು ನಿರ್ಮಾಸಿಲಾಗಿದ್ದು, ಕೂಲಿ ಕಾರ್ಮಿಕರು ಬಿಟ್ಟು ಕೆಲಸ ಮಾಡಿಸುತ್ತಿದ್ದಾರೆ.ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ಸೇರಬೇಕಾದ 30 ರಿಂದ 40 ರ ಎಕರೆಯನ್ನು ಭೂಗಳ್ಳರಿಂದ ರಕ್ಷಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠದ ಮುಂದೆ ಮನವಿ ಮಾಡಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ರಾಜ್ಯ ಸರ್ಕಾರ, ಬೆಂಗಳೂರು ಗ್ರಾಮಂತರ ಜಿಲ್ಲಾ ಉಪ ಆಯುಕ್ತರು, ದೊಡ್ಡಬಳ್ಳಾಪುರ ತಾಲೂಕು ಸಹಾಯಕ ಕಮಿಷನರ್, ತಹಶಿಲ್ದಾರ್ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.10 ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News