ರಾಮಮಂದಿರಕ್ಕಾಗಿ ಹೋರಾಡಿದವರ ಕಡೆಗಣನೆ ಸರಿಯಲ್ಲ: ಜಗದೀಶ್ ಶೆಟ್ಟರ್

Update: 2023-12-19 09:17 GMT

ಹುಬ್ಬಳ್ಳಿ: ರಾಮ ಮಂದಿರಕ್ಕಾಗಿ ಅವಿರತ ಹೋರಾಟ ಮಾಡಿದ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಕಡೆಗಣನೆ ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು,  ಜೀವನ ಪರ್ಯಂತ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಿದ ಅಡ್ವಾಣಿಯವರನ್ನು ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ನಿರ್ಲಕ್ಷಿಸುವುದು ಸರಿಯಲ್ಲ. ಇಬ್ಬರು ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ವಯಸ್ಸಿನ ಕಾರಣ ಹೇಳಿ ಅವರು ಬರುವುದೇ ಬೇಡ ಅನ್ನುವುದು ಸರಿಯಲ್ಲ ಎಂದರು.

ಬಿಜೆಪಿಯಲ್ಲಿ ಹಿಂದಿನಿಂದಲೂ ಹಿರಿಯರನ್ನು ಕಡೆಗಣನೆ ಮಾಡಲಾಗುತ್ತಿದೆ. ಈಗಾಗಲೇ ಅಡ್ವಾಣಿ, ಮನೋಹರ್ ಜೋಶಿ ಅವರನ್ನು 75 ವರ್ಷ ದಾಟಿದೆ ಎಂದು ಮೂಲೆಗುಂಪು ಮಾಡಲಾಗಿದೆ. ಈಗ ಅಯೋಧ್ಯಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಯಸ್ಸಿನ ನೆಪ ಹೇಳುವುದು ಸರಿಯಲ್ಲ. ಅಂತಹ ಹಿರಿಯ ನಾಯಕರನ್ನು ಕರೆಯಿಸಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News