HDK ಮನೆಗೆ ಅಕ್ರಮ ವಿದ್ಯುತ್‌ ಸಂಪರ್ಕ: ನಿಖಿಲ್​ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನು?

Update: 2023-11-14 18:03 GMT

ಹಾಸನ, ನ.14: ಬೆಂಗಳೂರಿನ ಜೆಪಿ ನಗರದಲ್ಲಿರುವ ಅವರ ನಿವಾಸದ ದೀಪಾಲಂಕಾರಕ್ಕಾಗಿ ವಿದ್ಯುತ್ ಕಳವು  ಮಾಡಿರುವ ಆರೋಪಕ್ಕೆ  ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಈ ಘಟನೆ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿದ್ದ ಅವರು ಈ ವಿಚಾರದ ಕುರಿತು ಮಾಧ್ಯಮದೊಂದಿಗೆ ಮಾತನಾಡಿ, ‘ನಮ್ಮಿಂದ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ' ಎಂದು ಹೇಳಿದರು. 

‘ಈಗಾಗಲೇ ಕುಮಾರಣ್ಣ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ನಮ್ಮ ಮನೆಯ ಕೆಲ ಹುಡುಗರು ತಪ್ಪು ಮಾಡಿರಬಹುದು' ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News