ಅಕ್ರಮ ಭೂ ಮಂಜೂರಾತಿ ಪ್ರಕರಣ: ಗ್ರಾಮ ಲೆಕ್ಕಿಗ ಗಿರೀಶ್ ಬಂಧನ

Update: 2023-09-25 17:25 GMT

ಚಿಕ್ಕಮಗಳೂರು, ಸೆ.25: ಅಕ್ರಮ ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮ ಲೆಕ್ಕಿಗ ಗಿರೀಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಡೂರು ಮತ್ತು ಮೂಡಿಗೆರೆ ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ಸರಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಅವರು ಬೇರೆ ಜಿಲ್ಲೆಗಳ ಎಂಟು ತಹಶೀಲ್ದಾರ್ ಗಳ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದು, ಅವರ ವರದಿ ಆಧರಿಸಿ ಮೇಲ್ನೋಟಕ್ಕೆ ಅಕ್ರಮ ಎಂದು ಕಂಡುಬಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.

ಪ್ರಭಾರ ಕಂದಾಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಿರೀಶ್, ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ಅಮಾನತಿಗೆ ಒಳಗಾಗಿದ್ದರು. ಸರಕಾರಿ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಈಗಾಗಲೆ ಕಡೂರು ತಹಶೀಲ್ದಾರ್ ಅವರು ಅಮಾನತುಗೊಂಡಿರುವುದಲ್ಲದೆ ಬಂಧನಕ್ಕೊಳಗಾಗಿದ್ದರು. ತನಿಖಾ ವರದಿಯ ಅಧ್ಯಯನ ಪೂರ್ಣ ಗೊಳ್ಳುವ ಮೊದಲೇ ಗಿರೀಶ್ ಅವರನ್ನು ಮೂಡಿಗೆರೆ ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News