ತುಂಗಭದ್ರಾ ಅಣೆಕಟ್ಟಿನ ಸ್ಟಾಪ್ ಗೇಟ್​ ಅಳವಡಿಕೆ ಯಶಸ್ವಿ | 16 ಕಾರ್ಮಿಕರಿಗೆ ತಲಾ 50 ಸಾವಿರ ರೂ.ನಗದು ಬಹುಮಾನ

Update: 2024-08-18 16:32 GMT

ವಿಜಯನಗರ : ವಿಜಯನಗರ ವ್ಯಾಪ್ತಿಯ ತುಂಗಭದ್ರಾ ಅಣೆಕಟ್ಟೆನ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯದಲ್ಲಿ ಹಗಲಿರುಳು ಶ್ರಮಿಸಿದ 16 ಮಂದಿ ಪ್ರಮುಖ ಕಾರ್ಮಿಕರಿಗೆ ತಲಾ 50 ಸಾವಿರ ರೂ.ನಗದು ನೀಡಿ ರವಿವಾರ ಸನ್ಮಾನ ಮಾಡಲಾಯಿತು.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹಮದ್ ಖಾನ್‍ರ ಸೂಚನೆ ಮೇರೆಗೆ ಕಂಪ್ಲಿ ಕ್ಷೇತ್ರದ ಶಾಸಕ ಜಿ.ಎನ್.ಗಣೇಶ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಇಮಾಮ್‌ ನಿಯಾಝಿ ಹಾಗೂ ಜಿಲ್ಲಾಧಿಕಾರಿಗಳ ಎಂ.ಎಸ್‌.ದಿವಾಕರ್ ಉಪಸ್ಥಿತಿಯಲ್ಲಿ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.

ಅಣೆಕಟ್ಟಿಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಗೊಳಿಸಿ ನಿಮಗೆಲ್ಲ ವೈಯಕ್ತಿಕವಾಗಿ ತಲಾ 50 ಸಾವಿರ ರೂ.ಬಹುಮಾನ ನೀಡುತ್ತೇನೆ ಎಂದು ಸಚಿವ ಝಮೀರ್ ಅಹ್ಮದ್ ಪ್ರಕಟಿಸಿದ್ದರು. ಅದರಂತೆಯೇ ಝಮೀರ್ ಅಹ್ಮದ್ ಅವರ ಅನುಪಸ್ಥಿತಿಯಲ್ಲಿ ಶಾಸಕ ಗಣೇಶ್ ಅವರಿಗೆ ಆ ಜವಾಬ್ದಾರಿ ವಹಿಸಿ, ವೈಯಕ್ತಿಕವಾಗಿ ಹಣ ಕಳುಹಿಸಿಕೊಟ್ಟು ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ್ದಾರೆಂದು ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News