ನಾಗವಲ್ಲಿ ರೀತಿ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವ ಜೆಡಿಎಸ್: ಕಾಂಗ್ರೆಸ್ ವಾಗ್ದಾಳಿ

Update: 2023-07-21 09:02 GMT
ಬಿಜೆಪಿ-ಜೆಡಿಎಸ್ ನಾಯಕರು

ಬೆಂಗಳೂರು: 'ರಾಜ್ಯದಲ್ಲಿ ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ' ಎಂದು ಬಿಜೆಪಿ, ಜೆಡಿಎಸ್ ಮೈತ್ರಿ ವದಂತಿ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. 

ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ @INCKarnataka ಬಿಜೆಪಿ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದೆ.

''ಈಗ ನಮಗಿರುವ ಪ್ರಶ್ನೆ. ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ'' ಎಂದು ಕಾಂಗ್ರೆಸ್ ಕುಟುಕಿದೆ. 

''ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ?''

''ಬಿಜೆಪಿಗೆ ದಲಿತರ ರಾಜಕೀಯ ಹಾಗೂ ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು ಬಿಜೆಪಿ. SCP/TSP ಹಣವನ್ನು ದುರುಪಯೋಗ ಮಾಡಿತ್ತು ಬಿಜೆಪಿ. ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು ಬಿಜೆಪಿ. ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ. ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ. ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ?'' ಎಂದು ಮತ್ತೊಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News