ಕಲಬುರಗಿ | ಬಯಲು ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ವೃದ್ಧನಿಗೆ ಸಾರಿಗೆ ಬಸ್‌ ಢಿಕ್ಕಿ; ಸ್ಥಳದಲ್ಲೇ ಮೃತ್ಯು

Update: 2023-10-10 07:22 GMT

ಕಲಬುರಗಿ: ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ವೃದ್ಧನಿಗೆ ಕೆಕೆಆರ್ಟಿಸಿ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಯಂಪಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ.

ಯಂಪಳ್ಳಿ ಗ್ರಾಮದ ನಿವಾಸಿ ಬಕ್ಕಯ್ಯ ಯಲ್ಲಯ್ಯ (65) ಮೃತಪಟ್ಟ ವೃದ್ಧ ಎಂದು ಗುರುತಿಸಲಾಗಿದ್ದು, ಗ್ರಾಮದ ಸಮೀಪ ಬಯಲು ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ಬಕ್ಕಯ್ಯ ಅವರಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News