ಕಲಬುರಗಿ: ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ಆರೋಪಿಯ ಬಂಧನ

Update: 2023-09-15 10:01 GMT

ಕಲಬುರಗಿ, ಸೆ.15: ತೊಗರಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಪ್ರಕರಣವೊಂದು ಚಿಂಚೋಳಿ ತಾಲೂಕಿನ ಸಂಗಾಪೂರ ಎಂಬಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನಿನ ಮಾಲಕ ವಿನೋದ ಪಾಂಡು ಬಂಧಿತ ಆರೋಪಿ. ಈತ ಸಂಗಾಪೂರದ ಗ್ರಾಮದ ಸರ್ವೇ ನಂ.1ರಲ್ಲಿರುವ ತನ್ನ ಹೊಲದಲ್ಲಿ ತೊಗರಿ ಬೆಳೆಯ ಮಧ್ಯದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದನೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಡಿವೈಎಸ್ಪಿ ವಿಜಯಕುಮಾರ ರಾಂಪುರೆ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಹೊಲದಲ್ಲಿ ಕಂಡುಬಂದ 48 ಸಾವಿರ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News