ಕಲಬುರಗಿ: ಹಾವು ಕಚ್ಚಿ ಬಾಲಕಿ ಮೃತ್ಯು

Update: 2023-08-14 09:25 GMT

ಅಕ್ಷತಾ ನಾಗಪ್ಪ ಹೊಗಾಡಿ- ಮೃತಪಟ್ಟ ಬಾಲಕಿ

ಕಲಬುರಗಿ: ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರವಿವಾರ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

8ನೇ ತರಗತಿಯಲ್ಲಿ ಓದುತ್ತಿದ್ದ ಗ್ರಾಮದ ಅಕ್ಷತಾ ನಾಗಪ್ಪ ಹೊಗಾಡಿ(17) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯನ್ನು ಚಿಕಿತ್ಸೆಗಾಗಿ ಸೇಡಂ ತಾಲೂ ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆನ್ನಲಾಗಿದೆ.

ಸುಲೇಪೇಟ ಠಾಣೆಯ ಸಬ್ ಇನಸ್ಪೆಕ್ಟರ್ ನಂದಿನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News