ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ

Update: 2023-09-14 12:52 GMT

ಕಲಬುರಗಿ: ಪತಿ ಅತನ ಪತ್ನಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ಪ್ರಕರಣ ಚಿತ್ತಾಪುರ ತಾಲೂಕಿನ ಅಲ್ಲೂರ (ಕೆ) ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.

ಹಣಮವ್ವ (35) ಕೊಲೆಯಾದ ಮಹಿಳೆಯಾಗಿದ್ದು,  ಬಸವರಾಜ ಪತ್ನಿಯ ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ. 

ಪತಿ, ಪತ್ನಿ ಮಧ್ಯೆ ಕಳೆದ ಐದಾರು ವರ್ಷಗಳಿಂದ ಕಲಹ ಉಂಟಾಗಿ ಕಿರುಕುಳದಿಂದಾಗಿ ಹಣಮವ್ವ ತನ್ನ ತವರು ಮನೆ ಅಲ್ಲೂರ (ಕೆ) ಗ್ರಾಮದಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದ್ದು, ಪತಿ ಬಸವರಾಜ ಅಲ್ಲೂರ (ಬಿ) ಗ್ರಾಮದವನಾಗಿದ್ದು ಆಗಾಗ ಪತ್ನಿಯ ಮನೆಗೆ ಬಂದು ಹೋಗುತ್ತಿದ್ದ. ಗುರುವಾರ ಸಹ ಪತ್ನಿ ಮನೆಗೆ ಬಂದಿದ್ದ ಆರೋಪಿಯು ಹಣಮವ್ವಗೆ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. 

ಘಟನಾ ಸ್ಥಳಕ್ಕೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಭೇಟಿ ನೀಡಿದರು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News