ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಅಜಿತ್ ಪವಾರ್ ಹೊರಬರುತ್ತಾರೆ ನೋಡ್ತಾ ಇರಿ..: ಕೆ.ಎಸ್. ಈಶ್ವರಪ್ಪ

Update: 2023-07-05 13:39 GMT

ದಾವಣಗೆರೆ: 'ಕಾಂಗ್ರೆಸ್ ಸರ್ಕಾರ ಮೂರು ತಿಂಗಳಲ್ಲೆ ಪತನವಾಗುತ್ತೆ. ಈ ಸರ್ಕಾರ ಬಹಳ ದಿನಗಳ ಕಾಲ ನಡೆಯುವುದಿಲ್ಲ. ಅವರ ಪಕ್ಷದ ಶಾಸಕರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದೆವು ಎನ್ನುವುದು ಕಾಡುತ್ತಿದೆ. ಅಜಿತ್ ಪವಾರ್ ರೀತಿ ಇನ್ನೂ ಕೆಲವರು ಹೊರಬರುತ್ತಾರೆ ನೋಡುತ್ತಾ ಇರಿ' ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. 

ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಅಂಗವಾಗಿ ದಾವಣಗರೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟದಲ್ಲಿ ಆದಂತೆ ಇಲ್ಲಿ ಕೂಡ ಆಗಲಿದೆ. ಈ ಸರ್ಕಾರ ಕೇವಲ ಮೂರು ತಿಂಗಳು ಮಾತ್ರ ಅಧಿಕಾರದಲ್ಲಿ ಇರುತ್ತೆ, ಕಾದು ನೋಡಿ ರಾಜ್ಯದಲ್ಲಿ ಏನಾಗುತ್ತೆ ಎಂದು ಭವಿಷ್ಯ ನುಡಿದರು.

ಮುಂದಿನ ಲೊಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಇದರಿಂದ ಆಯ್ಕೆ ಪ್ರಕ್ರಿಯೆಯಲ್ಲಿ ತಡವಾಗಿದೆ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News