ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ವಜಾಗೊಳಿಸಿ ಆದೇಶ

Update: 2024-05-31 16:47 GMT

ಡಾ. ಶಾಂತ್ ತಮ್ಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದ ಡಾ. ಶಾಂತ್ ತಮ್ಮಯ್ಯ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ವಜಾಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಶುಕ್ರವಾರ ಈ ಸಂಬಂಧ ಅರಣ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಆದೇಶದ ವರೆಗೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News